ಬಳ್ಳಾರಿ, ಏ.14: ದಿನಾಲು ಬ್ಯಾಂಕಿನಲ್ಲಿ ಹಣದ ವಹಿವಾಟು ನೋಡಿದ್ದ ಬ್ಯಾಂಕ್ ಆಫ್ ಬರೋಡದ ಗುತ್ತಿಗೆ ನೌಕರ ಖೋಟಾ ನೋಟ್ ಮುದ್ರಿಸಿ ಚಲಾಯಿಸಿದರೆ ಹೇಗೆಂದು ಕಲರ್ ಜೆರಾಕ್ಸ್ ಮಾಡಲು ಮುಂದಾಗಿದ್ದು. ಆತನ ಜೊತೆ ಮತ್ತೊಬ್ಬ ಸೇರಿದ್ದ. ಈ ಇಬ್ಬರನ್ನು ನಿನ್ನೆ ಸಂಜೆ ಗಾಂಧಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಬಿಸಲಳ್ಳಿ ಗ್ರಾಮದ ಹರಿಜನ ಕೇರಿಯ ಕೊಲ್ಲಾಪುರಮ್ಮ ದೇವಸ್ಥಾನದ ಬಳಿ ನಿವಾಸಿಗಳಾದ ಗಂಗಣ್ಣನ ಮಗ ಎ.ಕೆ.ಬಸವರಾಜ್ ಅಲಿಯಾಸ್ ಅಶೋಕ್(25) ಈತ ಬ್ಯಾಂಕ್ ಆಫ್ ಬರೋಡದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ […]
ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಸ್ಟಮ್ಸ್ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮೂಲಕ ಮಹಿಳೆಯಗೆ ನಗ್ನವಾಗುವಂತೆ ಸೂಚಿಸಿ ಅದನ್ನು ರೆಕಾರ್ಡ್ ಮಾಡಿಕೊಂಡ ವಂಚಕ ಬಳಿಕ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಫೆಡೆಕ್ಸ್ ಇಂಟರ್ನ್ಯಾಷನಲ್ ಕೊರಿಯರ್ ಕಂಪನಿಯಿಂದ ಎಂದು ಹೇಳಿಕೊಡು ವ್ಯಕ್ತಿ ಬೆಂಗಳೂರಿನ 29 ವರ್ಷದ ಮಹಿಳೆಗೆ ಕರೆ ಮಾಡಿದ್ದಾನೆ. ಮುಂಬೈನಿಂದ […]
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸಚಿವರಿಗೆ ದೇಶದ ಸುರಕ್ಷತೆ, ಭದ್ರತೆ ಮತ್ತು ನಾಗರಿಕ ಸಮಾಜದ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶ್ವತ್ಥನಾರಾಯಯಣ, ಕಾಂಗ್ರೆಸ್ಸಿಗರು ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರೆ. ಓಲೈಕೆ ಮಾಡುವುದು ಇವರ ಚಾಳಿ ಎಂದು ಟೀಕಿಸಿದರು. ಬಿಜೆಪಿ ಒತ್ತಾಯದ ಬಳಿಕ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ತುಂಬ ದಿನಗಳ ಬಳಿಕ ಎನ್ಐಎಗೆ ಹಸ್ತಾಂತರ […]
ವಿಮೆದಾರರು ಕ್ಯಾನ್ಸರ್, ಹೃದಯ ಅಥವಾ ಮೂತ್ರಪಿಂಡ ವೈಫಲ್ಯ, ಮತ್ತು ಏಡ್ಸ್ನಂತಹ ತೀವ್ರ ಕಾಯಿಲೆಗಳಿರುವ ವ್ಯಕ್ತಿಗಳಿಗೆ ಪಾಲಿಸಿ ನೀಡಲು ನಿರಾಕರಿಸುವುದನ್ನು ನಿಷೇಧಿಸಲಾಗಿದೆ. ಅಧಿಸೂಚನೆಯ ಪ್ರಕಾರ, ಪಾಲಿಸಿದಾರರ ಅನುಕೂಲಕ್ಕಾಗಿ ವಿಮಾದಾರರು ಕಂತುಗಳಲ್ಲಿ ಪ್ರೀಮಿಯಂ ಪಾವತಿಗೆ ಅನುಮತಿಸಲಾಗಿದೆ. ಪ್ರಯಾಣ ಪಾಲಿಸಿಗಳನ್ನು ಸಾಮಾನ್ಯ ಮತ್ತು ಆರೋಗ್ಯ ವಿಮಾದಾರರು ಮಾತ್ರ ನೀಡಬಹುದು ಎಂದು ಅದು ಹೇಳಿದೆ. ಆಯುಷ್ ಚಿಕಿತ್ಸೆಯ ವ್ಯಾಪ್ತಿಗೆ ಯಾವುದೇ ಮಿತಿಯಿಲ್ಲ. ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಂತಹ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಳು ಯಾವುದೇ […]
ವಿಜಯನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಖಾಲಿ ಚೊಂಬು (ನೀರಿನ ಪಾತ್ರೆ) ನೀಡಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ, ಮಾಜಿ ಸಚಿವ ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಅದನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸೋಲಿನ ಭೀತಿಯಿಂದ ಮೋದಿ ಸುಳ್ಳು ಹೇಳಲು ಆರಂಭಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಬಿಜೆಪಿಗೆ […]
ಹಾಸನ: ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳಿಂದ, ಮಹಿಳೆಯರಿಂದ ರಾಜ್ಯಾದ್ಯಂತ ಪ್ರತಿಭಟನೆಯಾಗುತ್ತಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್ ಐಟಿ ಆರಂಭಿಸಿದೆ. ಹಾಗಾದರೆ ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿರುವ ವಿಡಿಯೊ ಹೊಂದಿರುವ ಪೆನ್ ಡ್ರೈವ್ […]
ಬೆಂಗಳೂರು: ತಮಿಳುನಾಡು ನಂತರ ಕರ್ನಾಟಕ ಕೂಡ ಬಿಸ್ಕೆಟ್ ಮತ್ತು ಐಸ್ ಕ್ರೀಮ್ಗಳಂತಹ ಆಹಾರ ಪದಾರ್ಥಗಳ ಜೊತೆಗೆ ಲಿಕ್ವಿಡ್ ನೈಟ್ರೋಜನ್ ನ್ನು ನೇರ ಬಳಕೆಗೆ ಬಳಸುವ ಯಾವುದೇ ಆಹಾರ ವ್ಯಾಪಾರ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆದೇಶ ಹೊರಡಿಸುವ ಸಾಧ್ಯತೆಯಿದೆ. ತಮಿಳುನಾಡು ಆರೋಗ್ಯ ಇಲಾಖೆ ಏಪ್ರಿಲ್ 25 ರಂದು ಹೊರಡಿಸಿದ ಆದೇಶದಲ್ಲಿ ಆಹಾರ ಪದಾರ್ಥ ಅಥವಾ ಪಾನೀಯವನ್ನು ನೀಡುವ ಮೊದಲು ದ್ರವ ಸಾರಜನಕವನ್ನು ಸಂಪೂರ್ಣವಾಗಿ ಆವಿಯಾಗಿಸಬೇಕು ಎಂದು ಹೇಳುತ್ತದೆ. ದಾವಣಗೆರೆಯಲ್ಲಿ ನಡೆದ ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ “ಸ್ಮೋಕ್ […]
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ […]
ಬೆಂಗಳೂರು ಓಲಾ ಕ್ಯಾಬ್ಸ್ ಸಿಇಒ ಹೇಮಂತ್ ಬಕ್ಷಿ ಕಂಪೆನಿಗೆ ಸೇರಿದ ಒಂದೇ ವರ್ಷದೊಳಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಮಿಂಟ್ ವರದಿ ಮಾಡಿದೆ. ಹೇಮಂತ್ ಬಕ್ಷಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಭಾವಿಶ್ ಅಗರ್ವಾಲ್ ನೇತೃತ್ವದ ಓಲಾ ಕಂಪೆನಿಗೆ ಸೇರಿದ್ದರು. ಆದರೆ ಕಂಪನಿಯು ಜನವರಿಯಲ್ಲಿ ಅವರ ನೇಮಕವನ್ನು ಘೋಷಣೆ ಮಾಡಿತ್ತು ಎಂದು ಹೇಳಲಾಗಿದೆ. ಕಂಪನಿಯ ಆಂತರಿಕ ಇಮೇಲ್ ಪ್ರಕಾರ, ಹೇಮಂತ್ ಬಕ್ಷಿ ಕಂಪನಿಯ ಹೊರಗಿನ ಅವಕಾಶಗಳು ಬಂದ ಕಾರಣ ಹುದ್ದೆ ತೊರೆದಿದ್ದಾರೆ ಎಂದು […]
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈಗ ನಡೆದಿರುವ 14 ಕ್ಷೇತ್ರಗಳ ಚುನಾವಣೆಯಲ್ಲಿ 14 ಕೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಉತ್ತರ ಕರ್ನಾಟಕದಲ್ಲಿಯೂ ಅಷ್ಟೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಬಿಜೆಪಿಗೆ ಮತ ಹಾಕಿ ಮೇ 7 ರ ನಂತರ ಕಾಂಗ್ರೆಸ್ ಗೆ ಚೊಂಬು ಕೊಡಬೇಕು. ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಕುರಿತು ಬಸವರಾಜ ಬೊಮ್ಮಾಯಿ ಮಾತನಾಡಿ, […]
ಉಡುಪಿ ಉಡುಪಿ ನಗರಸಭೆ ಮತ್ತೆ ಕುಡಿಯುವ ನೀರಿನ ಸರಬರಾಜು ವಿಚಾರದಲ್ಲಿ ಹೊಸ ವ್ಯವಸ್ಥೆಗೆ ಸಿದ್ಧವಾಗಿದೆ. ಕಳೆದ ಬಾರಿ ಕುಡಿಯುವ ನೀರಿನ ವಿಚಾರದಲ್ಲಿ ಸಾಕಷ್ಟು ಸಂಕಷ್ಟ ಅನುಭವಿಸಿದ್ದ ನಗರ ನಿವಾಸಿಗಳಿಗೆ ಮತ್ತೆ ನೀರಿನ ತಲೆನೋವು ಪ್ರಾರಂಭವಾಗಿದೆ. ಉಡುಪಿ ನಗರಕ್ಕೆ ನೀರು ಒದಗಿಸುವ ಬಜೆ ಡ್ಯಾಮ್ನಲ್ಲಿ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರಾವಳಿಯ ಜಿಲ್ಲೆ ಉಡುಪಿಯಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿಯೇ ಕುಡಿಯುವ […]
ಚಾಮರಾಜನಗರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀಮಲೆ ಮಹದೇಶ್ವರ ಬೆಟ್ಟದಲ್ಲಿ ನಿನ್ನೆ (ಏಪ್ರಿಲ್ 29) ಸೋಮವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 34 ದಿನಗಳ ಅವಧಿಯಲ್ಲಿ ಬರೋಬ್ಬರಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. […]
ಬೆಂಗಳೂರು ಸಂವಿಧಾನ ಬದಲಾದರೆ ಎಲ್ಲ ಅವಕಾಶಗಳು ಕಳೆದು ಹೋಗಲಿವೆ. ಕೋಲಿ ಸಮಾಜವನ್ನು ಎಸ್ ಟಿ ಸೇರಿಸಲು ರಾಜ್ಯ ಸರ್ಕಾರ ಕಳಿಸಿದ ಪ್ರಸ್ತಾವನೆಯನ್ನು ಮೋದಿ ಸರ್ಕಾರ ತಿರಸ್ಕಾರ ಮಾಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ನಮ್ಮ ದೇಶ ಸತ್ಯಮೇವ ಜಯತೇ ಎನ್ನುವ ಮಾತನ್ನು ಅಕ್ಷರಶಃ ಪಾಲಿಸುವ ದೇಶವಾಗಿದೆ. ಮನೆಯಲ್ಲಿ ತಾಯಿ ಮಕ್ಕಳು ಸತ್ಯ ಹೇಳುವಂತೆ ಹೇಳುತ್ತಾಳೆ. ಮಹಾತ್ಮಾಗಾಂಧಿ ಕೂಡಾ ಸತ್ಯದ ಹಾದಿಯಲ್ಲೆ ನಡೆದರು. ರಾಜಕೀಯ ಕೂಡಾ ಸತ್ಯದ ದಾರಿಯಲ್ಲೇ ನಡೆದಿದೆ. […]
Lorem ipsum dolor sit amet, consectetur adipisicing elit, sed do eiusmod tempor
Jangan Tampilkan Lagi Ya, Saya Mau !