ಬಳ್ಳಾರಿ, ಏ.14: ದಿನಾಲು ಬ್ಯಾಂಕಿನಲ್ಲಿ ಹಣದ ವಹಿವಾಟು ನೋಡಿದ್ದ ಬ್ಯಾಂಕ್ ಆಫ್ ಬರೋಡದ ಗುತ್ತಿಗೆ ನೌಕರ ಖೋಟಾ ನೋಟ್ ಮುದ್ರಿಸಿ ಚಲಾಯಿಸಿದರೆ ಹೇಗೆಂದು ಕಲರ್ ಜೆರಾಕ್ಸ್ ಮಾಡಲು ಮುಂದಾಗಿದ್ದು. ಆತನ ಜೊತೆ ಮತ್ತೊಬ್ಬ ಸೇರಿದ್ದ. ಈ ಇಬ್ಬರನ್ನು ನಿನ್ನೆ ಸಂಜೆ ಗಾಂಧಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಬಿಸಲಳ್ಳಿ ಗ್ರಾಮದ ಹರಿಜನ ಕೇರಿಯ ಕೊಲ್ಲಾಪುರಮ್ಮ ದೇವಸ್ಥಾನದ ಬಳಿ ನಿವಾಸಿಗಳಾದ ಗಂಗಣ್ಣನ ಮಗ ಎ.ಕೆ.ಬಸವರಾಜ್ ಅಲಿಯಾಸ್ ಅಶೋಕ್(25) ಈತ ಬ್ಯಾಂಕ್ ಆಫ್ ಬರೋಡದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ […]
ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಸ್ಟಮ್ಸ್ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮೂಲಕ ಮಹಿಳೆಯಗೆ ನಗ್ನವಾಗುವಂತೆ ಸೂಚಿಸಿ ಅದನ್ನು ರೆಕಾರ್ಡ್ ಮಾಡಿಕೊಂಡ ವಂಚಕ ಬಳಿಕ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಫೆಡೆಕ್ಸ್ ಇಂಟರ್ನ್ಯಾಷನಲ್ ಕೊರಿಯರ್ ಕಂಪನಿಯಿಂದ ಎಂದು ಹೇಳಿಕೊಡು ವ್ಯಕ್ತಿ ಬೆಂಗಳೂರಿನ 29 ವರ್ಷದ ಮಹಿಳೆಗೆ ಕರೆ ಮಾಡಿದ್ದಾನೆ. ಮುಂಬೈನಿಂದ […]
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸಚಿವರಿಗೆ ದೇಶದ ಸುರಕ್ಷತೆ, ಭದ್ರತೆ ಮತ್ತು ನಾಗರಿಕ ಸಮಾಜದ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶ್ವತ್ಥನಾರಾಯಯಣ, ಕಾಂಗ್ರೆಸ್ಸಿಗರು ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರೆ. ಓಲೈಕೆ ಮಾಡುವುದು ಇವರ ಚಾಳಿ ಎಂದು ಟೀಕಿಸಿದರು. ಬಿಜೆಪಿ ಒತ್ತಾಯದ ಬಳಿಕ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ತುಂಬ ದಿನಗಳ ಬಳಿಕ ಎನ್ಐಎಗೆ ಹಸ್ತಾಂತರ […]
ಬೆಂಗಳೂರು ಲೋಕಸಭಾ ಚುನಾವಣೆ ಹಿನ್ಕೆಲೆ ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ವಿರುದ್ಧ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇತ್ತ ಮಂಡ್ಯದಿಂದ ಸ್ಪರ್ಧೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗೆದ್ದ ಬಳಿಕ ಕೇಂದ್ರ ಮಂತ್ರಿಯಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು, ಇದೀಗ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಮಹತ್ವದ ಸುಳಿವು ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ಅಳಿಯ ಹಾಗೂ ಬೆಂಗಳೂರು ಗ್ರಾಮಾಂತರ […]
ಬೆಂಗಳೂರು: ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಇಲ್ಲಿಯವರೆಗೆ, ಮಾದರಿ ನೀತಿ ಸಂಹಿತೆಯಡಿ ಪ್ರಮುಖ ಉಲ್ಲಂಘನೆಗಳಿಗಾಗಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ವಿರುದ್ಧ ಒಟ್ಟು 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಶುಕ್ರವಾರ […]
ಬೆಂಗಳೂರು: ಲೋಕಸಭಾ ಚುನಾವಣೆ 2024ರ ಮತದಾನ ದಿನದ ಹಿನ್ನಲೆಯಲ್ಲಿ ಏಪ್ರಿಲ್ 26 ರಂದು ಬೆಂಗಳೂರು ನಮ್ಮ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಮತದಾನ ನಡೆಯುವ ಏಪ್ರಿಲ್ 26ರಂದು ನಮ್ಮ ಮೆಟ್ರೋದ ಆ ದಿನ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55ವರೆಗೂ ವಿಸ್ತರಿಸಲಾಗಿದೆ. ಈ ನಾಲ್ಕು ಟರ್ಮಿನಲ್ ಗಳಿಂದ ಸಾಮಾನ್ಯ ದಿನಗಳಲ್ಲಿ ರಾತ್ರಿ 11 […]
ಬೆಂಗಳೂರು: ವಾರ್ಷಿಕ ಪರೀಕ್ಷೆಗಳನ್ನು ನಡೆಸುವಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್ಒಯು) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜೆ) ಎಂಎ ಅಂತಿಮ ವರ್ಷದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಏಪ್ರಿಲ್ 16 ಮತ್ತು 24 ರ ನಡುವೆ ಪರೀಕ್ಷೆ ಬರೆಯುವಾಗ ಬಹಿರಂಗವಾಗಿ ನಕಲು ಮಾಡುವುದು ಮತ್ತು ಮೊಬೈಲ್ ಫೋನ್ ಬಳಸುತ್ತಿರುವುದು ಕಂಡುಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದ ಯಾವುದೇ ಚಾರ್ಟ್ಗಳನ್ನು ಪ್ರದರ್ಶಿಸಲಾಗಿಲ್ಲ. ತರಗತಿ […]
ತರಬೇತಿ ವೇಳೆ ಅಂಚೆ ಮತದಾನ ಮಾಡುವುದಕ್ಕಾಗಿ ಅಧಿಕಾರಿಗಳು, ಫಾರಂ-12 ಅರ್ಜಿ ಭರ್ತಿ ಮಾಡಿ ರಿಟರ್ನಿಂಗ್ ಅಫೀಸರ್ಗೆ ಸಲ್ಲಿಸುತ್ತಾರೆ. ಫಾರಂನಲ್ಲಿ ಉಲ್ಲೇಖಿಸಿರುವ ವಿಳಾಸಕ್ಕೆ ಅಂಚೆ ಮತಪತ್ರ ಕಳುಹಿಸಬೇಕು. ಅದನ್ನು ಪಡೆದು ಅಧಿಕಾರಿಗಳು ಅಂಚೆ ಮತದಾನ ಮಾಡುತ್ತಾರೆ. ಆದರೆ, ಮೊದಲ ಹಂತದ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇದೆ. ಹೀಗಿರುವಾಗ, ಸರ್ಕಾರಿ ಸಿಬ್ಬಂದಿಗೆ ಅಂಚೆ ಮತದಾನ ಮಾಡುವ ಅವಕಾಶ ದೊರೆತಿಲ್ಲ.ಅಧಿಕಾರಿಗಳು ಕೊಟ್ಟಿರುವ ವಿಳಾಸಕ್ಕೆ ಈವರೆಗೆ ಅಂಚೆ ಮತಪತ್ರ ತಲುಪಿಲ್ಲ. ಕೆಲಸ ಮಾಡುತ್ತಿರುವ ಸ್ಥಳಕ್ಕೆ ಖುದ್ದಾಗಿ ಮತಪತ್ರ ಕಳುಹಿಸುವುದಾಗಿ […]
ನೀವು ಈಗಾಗಲೇ ಸೈಟ್ ಅಥವಾ ಜಮೀನನ್ನ ಹೊಂದಿದ್ರೆ ನಿಮ್ಮ ಜಾಗದಲ್ಲಿ ಮನೆ ಕಟ್ಟಬೇಕು ಅಂತಿದ್ರೆ ಯಾರ ಅನುಮತಿಯನ್ನು ಪಡೆಯಬೇಕಿರಲಿಲ್ಲ . ಆದರೆ ಈಗ ಸರ್ಕಾರ ಈ ನಿಯಮವನ್ನ ಕೊಂಚ ಬದಲಾಯಿಸಿದೆ. ಒಂದು ವೇಳೆ ನೀವು ಕಮರ್ಷಿಯಲ್ ಸೈಟ್ ನಲ್ಲಿ ಮನೆ ನಿರ್ಮಿಸಲಾಗ್ತಿದ್ರೆ ,ನೀವು ಸರ್ಕಾರದ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಆದರೆ ಒಂದು ವೇಳೆ ಜಮೀನಿನಲ್ಲಿ ಮನೆ ಕಟ್ಟಬೇಕು ಎಂದುಕೊಂಡಿದ್ದರೆ ಸರ್ಕಾರದ ಅನುಮತಿ ಕಡ್ಡಾಯವಾಗುತ್ತೆ. ಜಮೀನಿನಲ್ಲಿ ಮನೆ ನಿರ್ಮಿಸಬೇಕು ಎಂಬ ಕನಸು […]
ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್ & ಟ್ರ್ಯಾಕ್ಟರ್ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು […]
ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಈ ಭಾಗದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಶಿವಸೇನೆ (ಯುಬಿಟಿ) ಬೆಂಬಲ ನೀಡಿದೆ. ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕ್ಷೇತ್ರವು ಮಹಾರಾಷ್ಟ್ರದ ರಾಜ್ಯದ ಗಡಿಯಲ್ಲಿದೆ ಮತ್ತು ಹೆಚ್ಚಿನ ಸಂಖ್ಯೆಯ ಮರಾಠಿ ಜನಸಂಖ್ಯೆಯನ್ನು […]
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಗುರುವಾರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಮಾತ್ರ ಅವಕಾಶವಿದೆ. ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, […]
ಚಿತ್ರದುರ್ಗ: ಕಾಂಗ್ರೆಸ್ ಬೃಹತ್ ಸಮಾವೇಶದ ವೇದಿಕೆ ಮೇಲೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾಜಿ ಸಚಿವ ಹೆಚ್ ಆಂಜನೇಯ ಅವರ ಮೇಲೆ ರೇಗಿದ ಘಟನೆ ನಡೆದಿದೆ. ವೇದಿಕೆ ಮೇಲೆ ಪ್ರಿಯಾಂಕಾ ವಾದ್ರಾರ ಬಲಭಾಗದಲ್ಲಿ ನಿಂತಿದ್ದ ಯುವತಿಯೋರ್ವಳನ್ನು ದೂರಕ್ಕೆ ಹೋಗುವಂತೆ ಆಂಜನೇಯ ಆಕೆಯನ್ನು ಹಿಂದೆ ತಳ್ಳಲು ಪ್ರಯತ್ನಿಸುತ್ತಾರೆ. ಈ ವೇಳೆ ಕೋಪಗೊಂಡ ಪ್ರಿಯಾಂಕಾ ವಾದ್ರಾ ಯುವತಿಯನ್ನು ಯಾಕೆ ದೂರಕ್ಕೆ ತಳ್ಳುತ್ತೀರಾ ಎಂದು ಆಂಜನೇಯ ಕಡೆ ಕ್ಷೀಣವಾಗಿ ನೋಡಿ ಯುವತಿಯನ್ನು ತನ್ನ ಪಕ್ಕಕ್ಕೆ […]
Lorem ipsum dolor sit amet, consectetur adipisicing elit, sed do eiusmod tempor
Jangan Tampilkan Lagi Ya, Saya Mau !