ಬಳ್ಳಾರಿ, ಏ.14: ದಿನಾಲು ಬ್ಯಾಂಕಿನಲ್ಲಿ ಹಣದ ವಹಿವಾಟು ನೋಡಿದ್ದ ಬ್ಯಾಂಕ್ ಆಫ್ ಬರೋಡದ ಗುತ್ತಿಗೆ ನೌಕರ ಖೋಟಾ ನೋಟ್ ಮುದ್ರಿಸಿ ಚಲಾಯಿಸಿದರೆ ಹೇಗೆಂದು ಕಲರ್ ಜೆರಾಕ್ಸ್ ಮಾಡಲು ಮುಂದಾಗಿದ್ದು. ಆತನ ಜೊತೆ ಮತ್ತೊಬ್ಬ ಸೇರಿದ್ದ. ಈ ಇಬ್ಬರನ್ನು ನಿನ್ನೆ ಸಂಜೆ ಗಾಂಧಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಬಿಸಲಳ್ಳಿ ಗ್ರಾಮದ ಹರಿಜನ ಕೇರಿಯ ಕೊಲ್ಲಾಪುರಮ್ಮ ದೇವಸ್ಥಾನದ ಬಳಿ ನಿವಾಸಿಗಳಾದ ಗಂಗಣ್ಣನ ಮಗ ಎ.ಕೆ.ಬಸವರಾಜ್ ಅಲಿಯಾಸ್ ಅಶೋಕ್(25) ಈತ ಬ್ಯಾಂಕ್ ಆಫ್ ಬರೋಡದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ […]
ಬೆಂಗಳೂರು: ಹಣಕ್ಕಾಗಿ ವಂಚಕರು ಮಾಡುವ ಮೋಸ ದಿನಕ್ಕೊಂದು ರೀತಿಯಲ್ಲಿ ಅನಾವರಣಗೊಳ್ಳುತ್ತಿದೆ. ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ವಂಚಕನೊಬ್ಬ ಆನ್ ಲೈನ್ ನಲ್ಲಿ ಮಹಿಳೆಗೆ 14.57 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಸ್ಟಮ್ಸ್ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮೂಲಕ ಮಹಿಳೆಯಗೆ ನಗ್ನವಾಗುವಂತೆ ಸೂಚಿಸಿ ಅದನ್ನು ರೆಕಾರ್ಡ್ ಮಾಡಿಕೊಂಡ ವಂಚಕ ಬಳಿಕ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಫೆಡೆಕ್ಸ್ ಇಂಟರ್ನ್ಯಾಷನಲ್ ಕೊರಿಯರ್ ಕಂಪನಿಯಿಂದ ಎಂದು ಹೇಳಿಕೊಡು ವ್ಯಕ್ತಿ ಬೆಂಗಳೂರಿನ 29 ವರ್ಷದ ಮಹಿಳೆಗೆ ಕರೆ ಮಾಡಿದ್ದಾನೆ. ಮುಂಬೈನಿಂದ […]
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸಚಿವರಿಗೆ ದೇಶದ ಸುರಕ್ಷತೆ, ಭದ್ರತೆ ಮತ್ತು ನಾಗರಿಕ ಸಮಾಜದ ಬಗ್ಗೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶ್ವತ್ಥನಾರಾಯಯಣ, ಕಾಂಗ್ರೆಸ್ಸಿಗರು ತುಷ್ಟೀಕರಣ ರಾಜಕೀಯ ಮಾಡುತ್ತಿದ್ದಾರೆ. ಓಲೈಕೆ ಮಾಡುವುದು ಇವರ ಚಾಳಿ ಎಂದು ಟೀಕಿಸಿದರು. ಬಿಜೆಪಿ ಒತ್ತಾಯದ ಬಳಿಕ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣವನ್ನು ತುಂಬ ದಿನಗಳ ಬಳಿಕ ಎನ್ಐಎಗೆ ಹಸ್ತಾಂತರ […]
ಬೆಂಗಳೂರು: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ SIT ಅಂಗಳದಲ್ಲಿದೆ. ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಹುಟ್ಟಿದೆ. ಯಾಕೆಂದರೆ ಪ್ರಜ್ವಲ್ ಈಗಾಗಲೇ ಜರ್ಮನಿಯಲ್ಲಿದ್ದಾರೆ. ಇತ್ತ ರೇವಣ್ಣ […]
ಬೆಂಗಳೂರು; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಉರಿ ಬಿಸಿಲು, ಬಿಸಿ ಗಾಳಿ ಸೇರಿದಂತೆ ಹಲವು ಸವಾಲುಗಳು ಎದುರಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಈಗಾಲೇ ಆರೋಗ್ಯ ಇಲಾಖೆ ಉರಿ ಬಿಸಿಲಿನಲ್ಲಿ ಪ್ರಯಾಣ, ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಈ ಬೆಳವಣಿಗೆ ನಡುವೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರು ಇತಿಹಾಸದಲ್ಲಿ […]
ಬೆಂಗಳೂರು: ಮೇ.9 ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದೇಶದಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳ ಮತದಾನ ಪ್ರಕ್ರಿಯೆ ಮೇ.7 ರಂದು ನಡೆಯಲಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂದರೆ ಮೇ.8 ರಂದು ಕಾರ್ಯಕ್ರಮ ಆಯೋಜಿಸಲು ಕರ್ನಾಟಕ ಹಜ್ ಸಮಿತಿ ಚಿಂತನೆ ನಡೆಸಿದೆ. ಇದಕ್ಕೆ ನೀತಿ ಸಂಹಿತೆ […]
ಕಿಂಗ್ಫಿಶರ್ ಏರ್ಲೈನ್ಸ್ ನಿರ್ದೇಶಕ ಮತ್ತು ಯುನೈಟೆಡ್ ಬ್ರಿವರೀಸ್ ಸಮೂಹದ ಪ್ರಧಾನ ಹಣಕಾಸು ಅಧಿಕಾರಿ ಎ ಕೆ ರವಿ ನೆಡುಂಗಡಿ, ಯುನೈಟೆಡ್ ಬ್ರೀವರೀಸ್ ಖಜಾಂಚಿ ಎ ಹರೀಶ್ ಭಟ್, ಕಿಂಗ್ಫಿಶರ್ ಏರ್ಲೈನ್ಸ್ನ ಸಿಎಫ್ಓ ಎ ರಘುನಾಥನ್, ಕಿಂಗ್ಫಿಶರ್ ಏರ್ಲೈನ್ಸ್ ಕಂಪೆನಿ ಕಾರ್ಯದರ್ಶಿ ಭರತ್ ವೀರರಾಘವನ್, ಡೆಕ್ಕನ್ ಏರ್ ಸಂಸ್ಥಾಪಕ ಕ್ಯಾಪ್ಟರ್ ಆರ್ ಗೋವಿನಾಥ್, ಎಸ್ಬಿಐ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್ನ ಅಧ್ಯಕ್ಷ ಸುಪ್ರತಿಮ್ ಸರ್ಕಾರ್ ಮತ್ತಿರರನ್ನು ಆರೋಪಿಗಳನ್ನಾಗಿಸಲಾಗಿತ್ತು. 2018ರಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಮಲ್ಯ ಮತ್ತು […]
1ರಿಂದ 50ನೇ ಪ್ರತಿವಾದಿಗಳು, ಅವರ ಪ್ರತಿನಿಧಿಗಳು, ಸೇವಕರು, ಏಜೆಂಟರು, ಆಡಳಿತಗಾರರು, ಅವರು ನಿಯೋಜಿಸಿದವರು ಇತ್ಯಾದಿ ಯಾರೇ ಆದರೂ ದೂರಿನಲ್ಲಿ ಉಲ್ಲೇಖಿಸಿರುವಂತೆ ಯಾವುದೇ ತೆರನಾದ ಅಶ್ಲೀಲ ವಿಡಿಯೊ ಪ್ರಸಾರ/ಮದ್ರಣ/ಹಂಚಿಕೆ ಮಾಡದಂತೆ ಪ್ರತಿವಾದಿಗಳ ವಿರುದ್ಧ ಮಧ್ಯಂತರ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ಪ್ರತಿವಾದಿ ಮಾಧ್ಯಮಗಳಿಗೆ ನೋಟಿಸ್, ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ. ಫಿರ್ಯಾದಿ ಕಾಂತೇಶ್ ಪರ ವಕೀಲ ಎಂ ವಿನೋದ್ ಕುಮಾರ್ ಅವರು “ಪ್ರತಿವಾದಿಗಳು […]
ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆಯುತ್ತಿರುವ ನಡುವಲ್ಲೇ ಜನಸಾಮಾನ್ಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ. ಸರ್ಕಾರಿ ತೈಲ ಕಂಪನಿಗಳು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಇಂದಿನಿಂದ ದೇಶದ ವಿವಿಧ ನಗರಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ 19 ರೂ.ವರೆಗೆ ಇಳಿಕೆಯಾಗಿದೆ. ಆದಾಗ್ಯೂ, ಈ ಕಡಿತದ ಪ್ರಯೋಜನವು 19 ಕೆಜಿ ವಾಣಿಜ್ಯ LPG ಸಿಲಿಂಡರ್ಗಳ ಮೇಲೆ ಮಾತ್ರ […]
ವಿಮೆದಾರರು ಕ್ಯಾನ್ಸರ್, ಹೃದಯ ಅಥವಾ ಮೂತ್ರಪಿಂಡ ವೈಫಲ್ಯ, ಮತ್ತು ಏಡ್ಸ್ನಂತಹ ತೀವ್ರ ಕಾಯಿಲೆಗಳಿರುವ ವ್ಯಕ್ತಿಗಳಿಗೆ ಪಾಲಿಸಿ ನೀಡಲು ನಿರಾಕರಿಸುವುದನ್ನು ನಿಷೇಧಿಸಲಾಗಿದೆ. ಅಧಿಸೂಚನೆಯ ಪ್ರಕಾರ, ಪಾಲಿಸಿದಾರರ ಅನುಕೂಲಕ್ಕಾಗಿ ವಿಮಾದಾರರು ಕಂತುಗಳಲ್ಲಿ ಪ್ರೀಮಿಯಂ ಪಾವತಿಗೆ ಅನುಮತಿಸಲಾಗಿದೆ. ಪ್ರಯಾಣ ಪಾಲಿಸಿಗಳನ್ನು ಸಾಮಾನ್ಯ ಮತ್ತು ಆರೋಗ್ಯ ವಿಮಾದಾರರು ಮಾತ್ರ ನೀಡಬಹುದು ಎಂದು ಅದು ಹೇಳಿದೆ. ಆಯುಷ್ ಚಿಕಿತ್ಸೆಯ ವ್ಯಾಪ್ತಿಗೆ ಯಾವುದೇ ಮಿತಿಯಿಲ್ಲ. ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಂತಹ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಳು ಯಾವುದೇ […]
ವಿಜಯನಗರ: ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಖಾಲಿ ಚೊಂಬು (ನೀರಿನ ಪಾತ್ರೆ) ನೀಡಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ, ಮಾಜಿ ಸಚಿವ ಬಿ ಶ್ರೀರಾಮುಲು ಕೂಡ ಬಳ್ಳಾರಿ ಜಿಲ್ಲೆಗೆ ಅದನ್ನೇ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸೋಲಿನ ಭೀತಿಯಿಂದ ಮೋದಿ ಸುಳ್ಳು ಹೇಳಲು ಆರಂಭಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಬಿಜೆಪಿಗೆ […]
ಹಾಸನ: ಲೋಕಸಭೆ ಚುನಾವಣೆಯ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿ ಹಾಸನ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳಿಂದ, ಮಹಿಳೆಯರಿಂದ ರಾಜ್ಯಾದ್ಯಂತ ಪ್ರತಿಭಟನೆಯಾಗುತ್ತಿದೆ. ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್ ಐಟಿ ಆರಂಭಿಸಿದೆ. ಹಾಗಾದರೆ ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತಿರುವ ವಿಡಿಯೊ ಹೊಂದಿರುವ ಪೆನ್ ಡ್ರೈವ್ […]
ಬೆಂಗಳೂರು: ತಮಿಳುನಾಡು ನಂತರ ಕರ್ನಾಟಕ ಕೂಡ ಬಿಸ್ಕೆಟ್ ಮತ್ತು ಐಸ್ ಕ್ರೀಮ್ಗಳಂತಹ ಆಹಾರ ಪದಾರ್ಥಗಳ ಜೊತೆಗೆ ಲಿಕ್ವಿಡ್ ನೈಟ್ರೋಜನ್ ನ್ನು ನೇರ ಬಳಕೆಗೆ ಬಳಸುವ ಯಾವುದೇ ಆಹಾರ ವ್ಯಾಪಾರ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆದೇಶ ಹೊರಡಿಸುವ ಸಾಧ್ಯತೆಯಿದೆ. ತಮಿಳುನಾಡು ಆರೋಗ್ಯ ಇಲಾಖೆ ಏಪ್ರಿಲ್ 25 ರಂದು ಹೊರಡಿಸಿದ ಆದೇಶದಲ್ಲಿ ಆಹಾರ ಪದಾರ್ಥ ಅಥವಾ ಪಾನೀಯವನ್ನು ನೀಡುವ ಮೊದಲು ದ್ರವ ಸಾರಜನಕವನ್ನು ಸಂಪೂರ್ಣವಾಗಿ ಆವಿಯಾಗಿಸಬೇಕು ಎಂದು ಹೇಳುತ್ತದೆ. ದಾವಣಗೆರೆಯಲ್ಲಿ ನಡೆದ ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ “ಸ್ಮೋಕ್ […]
Lorem ipsum dolor sit amet, consectetur adipisicing elit, sed do eiusmod tempor
Jangan Tampilkan Lagi Ya, Saya Mau !