ಯಡಿಯೂರಪ್ಪ ಕುಟುಂಬದ ವಿರುದ್ಧ ತಿರುಗಿಬಿದ್ದಿರುವ ಮಾಜಿ ಸಚಿವ ಈಶ್ವರಪ್ಪ, ಕೊನೆಗೂ ಹಿಡಿದ ಸಾಧಿಸಿದ್ದಾರೆ. ತಾವು ಹೇಳಿದಂತೆ ಬಂಡಾಯ ಅಭ್ಯರ್ಥಿ ಆಗಿ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಜನ ಬೆಂಬಲದೊಂದಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡಿ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ವೇಳೆ ಮಾತನಾಡಿದ ಈಶ್ವರಪ್ಪ, ನಾಮಪತ್ರ ಸಲ್ಲಿಸುವ ವೇಳೆ ಬೃಹತ್ ಸಂಖ್ಯೆಯಲ್ಲಿ ನಮಗೆ ಬೆಂಬಲಕ್ಕೆ ಸಿಕ್ಕಿದೆ. ನನಗೆ ಬೆಂಬಲವಾಗಿ ನಿಂತ ಮತದಾರರಿಗೆ ಧನ್ಯವಾದ, ಜಾತಿ, ಧರ್ಮದ ಜನರು ನನ್ನ ಬೆನ್ನಿಗೆ ನಿಂತಿದ್ದಾರೆ ಅಂತ ಹೇಳಿದ್ರು. ಕ್ಷೇತ್ರದ ಜನರ ಆಸೆ ನಾನು ಗೆಲ್ಲಬೇಕು ಅಂತ ಇದೆ. ಅವರೆ ನನ್ನನ್ನ ಗೆಲ್ಲಿಸುತ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Lorem ipsum dolor sit amet, consectetur adipisicing elit, sed do eiusmod tempor
Jangan Tampilkan Lagi Ya, Saya Mau !